Jump to ratings and reviews
Rate this book

ಬರೀ ಎರಡು ರೆಕ್ಕೆ

Rate this book

224 pages, Unknown Binding

First published January 1, 2011

9 people want to read

About the author

Sunanda Prakasha Kadame

3 books4 followers

Ratings & Reviews

What do you think?
Rate this book

Friends & Following

Create a free account to discover what your friends think of this book!

Community Reviews

5 stars
4 (44%)
4 stars
5 (55%)
3 stars
0 (0%)
2 stars
0 (0%)
1 star
0 (0%)
Displaying 1 - 5 of 5 reviews
Profile Image for Prashanth Bhat.
2,164 reviews140 followers
June 21, 2020
ವಿವೇಕ ಶಾನಭಾಗರ ಒಂದು ಬದಿ ಕಡಲಿನ ಇನ್ನೊಂದು ಆವೃತ್ತಿಯಂತೆ ಭಾಸವಾಗುವ ಈ ಕಾದಂಬರಿ ಉತ್ತರ ಕನ್ನಡದ ಇನ್ನೊಂದು ಬಗೆಯ ಕಥನ
5 reviews6 followers
May 8, 2022
ಪುಟ್ಟ ಪಾದದ ಗುರುತಿಗೆ ಬರೀ ಎರಡು ರೆಕ್ಕೆ!

ಒಂದು ಬರೆಹ ಅಥವಾ ಸಿನೆಮಾ ಇಷ್ಟವಾಗುವುದಕ್ಕೆ ಹಲವು ಕಾರಣಗಳಿರಬಹುದು. ಯಾವುದೋ ಥರದ ಹೊಸ ಪ್ರಯತ್ನ ಮಾಡುವುದಕ್ಕೆ ಹೊರಟಿದ್ದಾರೆ, ಸಣ್ಣ ಪುಟ್ಟ ಹಿನ್ನೆಡೆಗಳಿದ್ದರೆ ಅವುಗಳನ್ನು ಮುನ್ನೆಲೆಗೆ ತರುವದು ಬೇಡ ಅಂದುಕೊಳ್ಳುತ್ತಲೇ ಇಷ್ಟವಾಗಬಹುದು ಅಥವಾ ಇದು ನನ್ನ ಪರಿಸರ, ನನ್ನ ಬದುಕಿಗೆ, ದೈನಂದಿನ ಸಂಗತಿಗಳಿಗೆ ಹೊಂದುತ್ತದೆ ಅನ್ನುವ ಕಾರಣದಿಂದ ಇಷ್ಟವಾಗಬಹುದು. ಅದರಲ್ಲಿ ಭಾವನಾತ್ಮಕವಾದ ಸನ್ನಿವೇಶಗಳಿವೆ, ಸಮಾಜಕ್ಕೆ ಉತ್ತಮ ಸಂದೇಶ ಕೊಡುತ್ತದೆ, ನಮ್ಮೊಳಗಿನ ಹುಳುಕುಗಳನ್ನು ಎತ್ತಿ ಹೇಳುತ್ತದೆ, ದಮನಿತರ ದನಿಯಂತೆ ಕಾಣುತ್ತದೆ, ಅದನ್ನು ಕಟ್ಟಿಕೊಟ್ಟ ರೀತಿ ಬೇರೆಯದೇ ಆಗಿದೆ ಇತ್ಯಾದಿ ಇತ್ಯಾದಿ ಅನೇಕಾನೇಕ ಕಾರಣಗಳು. ಆದರೆ ಇವೆಲ್ಲವುಗಳ ಜೊತೆಗೆ, ಸಿನೆಮಾ ನೋಡುವಾಗಲೋ ಪುಸ್ತಕ ಓದುವಾಗಲೋ ಇರುವ ಮನಸ್ಥಿತಿಯ ಆಧಾರದ ಮೇಲೂ ಅದು ನೀಡುವ ಅನುಭವ ಪ್ರತ್ಯೇಕತೆಯನ್ನು ಪಡೆದುಕೊಳ್ಳುತ್ತದೆ. ಅದೇನೇ ಇದ್ದರೂ ಮನುಷ್ಯನಿಗೆ ನಂಬಿಕೆಗಳು ಬೇಕು, ತನ್ನ ತತ್ವಗಳನ್ನು ಉದ್ದೀಪಿಸುವ ಸಂಗತಿಗಳು ಬೇಕು, ತನ್ನ ಯೋಚನಾ ಧಾರೆಗಳನ್ನು ಬೆಂಬಲಿಸುವ ಹಾಗೂ ಸಮರ್ಥಿಸುವ ದಾಖಲೆಗಳು ಬೇಕು. ಇದರಿಂದಾಗಿ ತಾನು ಇತರರ ನಂಬಿಕೆಗಳನ್ನು ತಿರಸ್ಕರಿಸುವಂತಾದರೆ ಅದು ಬೋನಸ್ ಇದ್ದ ಹಾಗೆ! "ಇವೆಲ್ಲವೂ ಸಹಜ ತುಡಿತಗಳು, ಇವುಗಳಿಂದ ಮುಕ್ತವಾಗಿದ್ದಲ್ಲಿ ನೀವು ಈ ಸಮಾಜದ ಭಾಗವೇ ಅಲ್ಲ, ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ನಿಮ್ಮಿಂದ ಸಾಸಿವೆಯಷ್ಟೂ ಉಪಯೋಗವಿಲ್ಲ" (ಎಳ್ಳನ್ನು ಖಾಲಿಮಾಡಿ ಸಾಸಿವೆ ಬಳಸಲಾಗಿದೆ!). ಇಂಥ ಒಂದು ಪರಿಸ್ಥಿತಿ ಇರುವಾಗ ಕೆಲವು ಕೃತಿಗಳು ಈ ಸಂಗತಿಗಳ‌ನ್ನಿಟ್ಟುಕೊಂಡೂ ಬೇರೆಯದಾಗಿ ನಿಲ್ಲುತ್ತವೆ. ಶ್ರೀಮತಿ ಸುನಂದಾ ಪ್ರಕಾಶ ಕಡಮೆಯವರ ಎರಡು ಕೃತಿಗಳ ಕುರಿತಾಗಿ ನಾನು ಇವತ್ತು ಹೇಳಹೊರಟಿದ್ದೇನೆ. ಒಂದು ಅವರ ಚೊಚ್ಚಲ‌ ಕಥಾ ಸಂಕಲನ 'ಪುಟ್ಟ ಪಾದದ ಗುರುತು' ಇನ್ನೊಂದು ಇವರ ಚೊಚ್ಚಲ ಕಾದಂಬರಿ 'ಬರೀ ಎರಡು ರೆಕ್ಕೆ'

ಪುಟ್ಟ ಪಾದದ ಗುರುತು ಅನ್ನೋ ಕತೆಯನ್ನೇ ಪುಸ್ತಕದ ಶೀರ್ಷಿಕೆಯಾಗಿ ಮಾಡಿರುವ ಶ್ರೀಮತಿ ಸುನಂದಾ ಕಡಮೆಯವರ ಕೃತ್ಯಕ್ಕೆ ಆ ಶೀರ್ಷಿಕೆ ನ್ಯಾಯ ಒದಗಿಸುತ್ತದೆ. ಬಹುತೇಕ ಕಥೆಗಳು ಬಾಲ್ಯ, ಮಾತೃತ್ವ ಹಾಗೂ ಮಕ್ಕಳ ಕುರಿತಾದ ವಸ್ತುಗಳನ್ನು ಹೊಂದಿವೆ. ಆದರೆ ಬರೀ ಅಷ್ಟೇ ಇಲ್ಲ, ಅದರಾಚೆಗೂ ಬೇರೆ ಕತೆಗಳಿವೆ ಹಾಗೂ ಆ ಕತೆಗಳು ಅಷ್ಟೇ ಸೊಗಸಾಗಿವೆ ಕೂಡಾ. ಬದುಕಿನ ಬಹುತೇಕ ಸಂಗತಿಗಳು ವರ್ತಮಾನದಲ್ಲಿ 'ಎಲ್ಲವೂ' ಅಥವಾ 'ನಗಣ್ಯ' ಅಷ್ಟೇ ಆಗಿ ಕಾಣಬಹುದು. ಆದರೆ ಕಾಲಾಂತರದಲ್ಲಿ ಆ ಸಂಗತಿಗಳ ನೆನಪುಗಳು ಈ ಅಳತೆಗಳ ಮಿತಿಗಳಿಂದಾಚೆ ನಿಲ್ಲುತ್ತವೆ. ಗಣ್ಯ ನಗಣ್ಯಗಳ ಹಂಗು ತೊರೆದು ಬದುಕಿನ 'ಬದುಕಿದ ಕ್ಷಣ'ಗಳಾಗುತ್ತವೆ. ಅದರಲ್ಲೂ ಮೊದಲ ಸಂಕಲನವೆಂದಾಕ್ಷಣ ಅದನ್ನು 'ಜನ' ನೋಡುವ ರೀತಿ ಬೇರೆ. ( ಓದುಗರು ನೋಡುವ ರೀತಿ ಬೇರೆ ಅಂತ ಬಳಸಿಲ್ಲ!) ಆ ಲೇಖಕನಿಗೆ ಅಥವಾ ಆ ಲೇಖಕಿಗೆ ಹೀಗೆ ಬರೆಯಬಹುದಿತ್ತು ಅಥವಾ ಹಾಗೆ ಬರೆಯಬಹುದಿತ್ತು ಅನ್ನುವವರ ಬಳಗವೂ ದೊಡ್ಡದೇ ಆಗಿರುತ್ತದೆ ( ಅದು ತಪ್ಪು ಅಂತಲ್ಲ !). ಜೊತೆಗೆ ಇನ್ನ್ಯಾವುದೋ ಲೇಖಕ ಲೇಖಕಿಯರೊಂದಿಗೆ ಈ ಕೃತಿಯನ್ನಿಟ್ಟು ತುಲನೆ ಮಾಡುವುದು, ಇದು ಅವರ ಬರೆಹವನ್ನು ಹೋಲುತ್ತದೆ ಅನ್ನುವುದು ಇವೆಲ್ಲವೂ ಸಹಜವೇ; ಹಾಗೂ, ಈ 'ಹೋಲುವಿಕೆ'ಯನ್ನು ಮೀರುವುದಕ್ಕೇ ಕೆಲವೊಮ್ಮೆ ಬಹಳ ಕಷ್ಟಪಡಬೇಕಾಗುತ್ತದೆ. ಅದೆಷ್ಟೇ ಆದರೂ ಎಲ್ಲೋ ಒಂದು ಕಡೆ ಯಾವುದೋ ಸಾಲಿಂದಲೋ, ಯಾವುದೋ ಪುಸ್ತಕದಿಂದಲೋ, ಕಥಾ ವಸ್ತುವಿನಿಂದಲೋ, ಬರೆಹದ ಶೈಲಿಯಿಂದಲೋ ಪ್ರಭಾವಿತರಾಗುವುದು ತಪ್ಪುವುದಿಲ್ಲ ಹಾಗೂ ಅದು ತಪ್ಪಲ್ಲ ಕೂಡಾ! ಬದುಕಿನಿಂದ ಬರೆಹ ಹುಟ್ಟಬೇಕೆನ್ನುವುದು ಸತ್ಯವಾದರೂ ಆ ಬರೆಹದ ಹುಟ್ಟಿಗೆ ಕಾರಣವಾಗುವ ವಿಷಯಗಳು ಹಲವಾರು ಇರಬಹುದಲ್ಲಾ! ಹಾಗೂ ಪ್ರತಿ ಲೇಖಕರಿಗೂ ಅವರದ್ದೇ ಆದ ಮಿತಿಗಳಿವೆ; ಲೇಖಕಿಯರಿಗೆ ಮಿತಿಗಳ ಮೇಲೆ ಮಿತಿಗಳಿವೆ! ಈಗ ಇವೆಲ್ಲವುಗಳನ್ನು ಆಚೆಗಿಟ್ಟು ಒಂದು ಕೃತಿಯಾಗಿ ನೋಡಿದರೂ ಈ ಪುಸ್ತಕದ ಕತೆಗಳಲ್ಲಿ ಕಾಣುವುದು ಅಪ್ಪಟ ಮುಗ್ಧತೆ, ಕರುಣೆ, ಆರ್ದ್ರತೆ. ಕತೆಯ ಪಾತ್ರ ಪ್ರಾರ್ಥಿಸಿದಾಗ ನಾವು ಪ್ರಾರ್ಥಿಸುತ್ತಾ, ಕತೆಯ ಪಾತ್ರ ಉಪ್ಪಿನ ಕಾಯಿಯ ಬಾಟಲಿಯನ್ನು ತೆಗೆಯಲು ಪ್ರಯತ್ನಿಸುವಾಗ ನಾನೂ ಒಂದು ಕೈ ನೋಡೇಬಿಡೋಣ ಅಂತ ಓದುಗ ನೆನೆಯುವುದು, ಖಾಯಂ ಗಿರಾಕಿಗಳ ಹತ್ರ ಕೆಲವೊಂದಕ್ಕೆ ದುಡ್ಡು ತೆಗೆದುಕೊಳ್ಳದೇ 'ಎಕ್ಸ್ಟ್ರಾ' ಕೊಡುವ ವ್ಯಾಪಾರಸ್ಥರು, ಸರ್ಕಾರದ ಯಾವುದೋ ಯೋಜನೆ ಬಂತೆಂದು ಮನೆ ಜಮೀನನ್ನು ಬಿಟ್ಟುಕೊಡಲೇಬೇಕಾದ ಸ್ಥಿತಿ ತಲುಪುವ ನಾಗರಿಕರು, ಅಥವಾ ಹೇಳಿಕೊಳ್ಳದ ಹಳೆಯ ಪ್ರೇಮದ ನವಿರು ನೆನಪು ಹೀಗೆ ಇಂಥ ಸಂಗತಿಗಳು ನಿತ್ಯವೂ ಕಾಣುವ ಕೇಳುವ ಅನುಭವಿಸುವಂಥವುಗಳು. ಚಾದರ ಹಾಗೂ ಹುಲಿಯನ್ನು ಒಳಗೊಂಡ ಒಂದು ಸನ್ನಿವೇಶವಂತೂ 'ಆಹ್ಞ್, ಅದೆಷ್ಟ್ ಚೆಂದ' ಅಂತನ್ನಿಸದೇ ಹೋಗುವುದಿಲ್ಲ. ಕೆಲವೊಂದು ಕತೆಗಳ ಅಂತ್ಯ ಒಂದಷ್ಟು ಫ್ಯಾಂಟಸಿ ಶೈಲಿಯಲ್ಲಿರುವುದು ನನಗೆ ಅಷ್ಟೇನು ಹಿಡಿಸದಿದ್ದರೂ ಕತೆಗಳ‌ ಉದ್ದೇಶಕ್ಕೆ ಅವು ಜಾಸ್ತಿ‌ ಮೋಸ ಮಾಡಿದ ಹಾಗೇನೂ ಆಗಿಲ್ಲ.

ಹೆಣ್ಣಿನ ಲೋಕವನ್ನು ಲೇಖಕಿ ಕಟ್ಟಿಕೊಡುವ ರೀತಿ ಚೆಂದ. ಗಂಡು ಬರೆವ ಸಾಹಿತ್ಯದಲ್ಲಿ ಹೆಣ್ತನದ ಸೂಕ್ಷ್ಮಗಳು ಬರುವುದಾದರೂ ಹೇಗೆ? ಅದಕ್ಕೆ ಲೇಖಕಿಯರೇ ಆಗಬೇಕು! ಇದಕ್ಕೊಂದು ಚೆಂದದ ಉದಾಹರಣೆಯೆಂದರೆ 'ಬರೀ ಎರಡು ರೆಕ್ಕೆ'ಯಲ್ಲಿ ಪೊಲಕಿನ(ಬ್ಲೌಸ್) ಕುರಿತಾಗಿ‌ ಒಂದು ಸಣ್ಣ ಮಾತುಕತೆ ಬರುತ್ತದೆ; ಅದರಲ್ಲಿನ ಸಹಜತೆ ಮತ್ತು ಕಚಗುಳಿಯಂಥ ತುಂಟತನ. ಅದಕ್ಕಾಗಿಯೇ ಹೆಣ್ಣು ಕಟ್ಟಿಕೊಡುವ ಹೆಣ್ತನದ ನವಿರು ಭಾವಗಳು ಮುಖ್ಯ ವೇದಿಕೆಗೆ ಬರಬೇಕು. ಅದಕ್ಕಾಗಿಯಾದರೂ ಲೇಖಕಿಯರು ಗಂಡು ಹಾಕಿಟ್ಟ ಸಾಹಿತ್ಯದ ಚೌಕಟ್ಟುಗಳಾಚೆ ಇಣುಕಬೇಕಾಗಿರುವುದು ತುರ್ತು ಕೂಡಾ ಹೌದು. ಶ್ರೀಮತಿ ಸುನಂದಾ ಕಡಮೆಯವರು ಒಂದು ಸಂದರ್ಶನದಲ್ಲಿ ಹೇಳಿದ್ದಾರೆ; ಲೇಖಕಿಯರಿಗೆ ಎಷ್ಟೆಲ್ಲಾ ಕಟ್ಟುಪಾಡುಗಳಿದ್ದವು ಅವರು ಬರೆವಣಿಗೆ ಶುರುಮಾಡಿದ ಸಮಯದಲ್ಲಿ, ಮುಂದೊಂದು ದಿನ ಮುಕ್ತವಾಗಿ ಬರೆಯುವಂಥ ವಾತಾವರಣ ಸೃಷ್ಟಿಯಾದೀತೇನೋ ಎಂದು. ನಾವಿನ್ನೂ ಆ ಮುಕ್ತತೆಯ ಹಾಗೂ ಬದಲಾವಣೆಯ ಹೊಸ್ತಿಲಲ್ಲೇ ಇದ್ದೇವಾ; ಗೊತ್ತಿಲ್ಲ! ಆದರೆ, ಕೆಲವು ಲೇಖಕಿಯರು ಇಂಥ ಪ್ರಯತ್ನಗಳನ್ನು ಮಾಡ್ತಿರೋದು ಸಂಭ್ರಮದ ಸಂಗತಿಗಿಂತ ಚೂರೇ ಚೂರು ಕೂಡಾ ಕಡಿಮೆಯಲ್ಲ.

ಶ್ರೀಮತಿ ಸುನಂದಾ ಅವರ ಊರು ಉತ್ತರ ಕನ್ನಡದ ಅಲಗೇರಿ, ನನ್ನ ಊರು ಅದೇ ಉತ್ತರ ಕನ್ನಡದ ತಲಗೇರಿ. ಅವರ 'ಬರೀ ಎರಡು ರೆಕ್ಕೆ'ಯಲ್ಲಿ ಬರುವ ಒಂದು ಊರಿನ ಹೆಸರು ಹಟ್ಟಿಕೇರಿ; ನನ್ನೂರಿನ ಪಕ್ಕದ ಊರ ಹೆಸರೂ ಹಟ್ಟಿಕೇರಿ. ಅವರ ಈ ಕಾದಂಬರಿಯಲ್ಲಿ ಇರುವ ಸಂಭಾಷಣೆಗಳಲ್ಲಿ ಆಗಾಗ ಹಾಲಕ್ಕಿ ಒಕ್ಕಲಿಗರ ಮಾತುಗಳು ಬರುತ್ತವೆ. ನಮ್ಮ ಮನೆ ಇರೋದು ಕೂಡಾ ಈ ಹಾಲಕ್ಕಿ ಸಮಾಜದ ಕೊಪ್ಪದಲ್ಲಿ. ಹಾಗಾಗಿ ಈ ಕತೆಯಂತೂ ನನಗೆ ನನ್ನೂರನ್ನು ತಂದು ಎದುರಿಗಿಟ್ಟಂತೆ ಕಂಡಿದ್ದರಲ್ಲಿ ಯಾವ ಅನುಮಾನವೂ ಇಲ್ಲ. ಹಾಲಕ್ಕಿ ಹೆಂಗಸರು ಯಾವತ್ತೂ ಗಟ್ಟಿಗರು. ಗಂಡಸಿಗೆ ಸರಿಸಮನಾಗಿ ಕೆಲಸ ಮಾಡುವವರು. ಹಾಗಿದ್ದರೂ ಸಂಜೆ ಗಂಡ ಕುಡಿದು ಬಂದಾಗ ಅವನಿಂದ ಹೊಡೆತ ತಿನ್ನುತ್ತಿದ್ದರು. ಕುಡಿದ ವ್ಯಕ್ತಿ ತಾನಾಗಿ ನಿಂತುಕೊಳ್ಳೋದಕ್ಕೇ ಆಗೋದಿಲ್ಲ, ಅಂಥವನ ಕೈಲಿ ಇಷ್ಟು ಗಟ್ಟಿಗಿತ್ತಿಯರು ಯಾಕೆ ಒದೆ ತಿನ್ನುತ್ತಾರೆ; ಯಾಕೆ ತಿರುಗಿ ನಾಲ್ಕು ಬಾರಿಸೋದಿಲ್ಲ ಅನ್ನುವ ಪ್ರಶ್ನೆ ನನ್ನನ್ನು ಮುಂಚೆಯೂ ಕಾಡಿತ್ತು; ಈಗಲೂ ಪ್ರಶ್ನೆ ಇದೆ ಅಲ್ಪ ಸ್ವಲ್ಪ ಸಮಾಧಾನಕರ ಉತ್ತರಗಳೊಂದಿಗೆ. ಮೊದಲನೆಯದಾಗಿ ಗಂಡನೇ ದೇವರು, ಎಷ್ಟಿದ್ದರೂ ಗಂಡ ಅನ್ನುವ ಒಂದು ಗೌರವ ಭಾವ, ಇನ್ನೊಂದು ರಾತ್ರಿ ಗಂಡ ಕುಡಿದಿದ್ದಾಗ ಹೊಡೆದುಬಿಡಬಹುದು, ಆಮೇಲೆ ಬೆಳಿಗ್ಗೆ ಕುಡಿತದ ನಶೆ ಇಳಿದಾಗ ಗಂಡಸು ಏನಿದ್ದರೂ ಗಂಡಸೇ ಅಲ್ಲವೇ ಅನ್ನುವ ಭಯವೂ ಇರಬಹುದು. ಆದರೂ, ಅವರು ಮನಸ್ಸು ಮಾಡಿದರೆ ಏನೆಲ್ಲವನ್ನು ಮಾಡಬಹುದು.

ಮೊದಲೇ ಹೇಳಿದ ಹಾಗೆ, ಎಲ್ಲಾ ವ್ಯಕ್ತಿಗಳಿಗೂ ಅವರವರದ್ದೇ ಆದ ತತ್ವ ಸಿದ್ಧಾಂತಗಳಿರುತ್ತವೆ. ಕತೆ ಹೇಳುವವರು ತಮ್ಮ ವೈಯಕ್ತಿಕ ಸಿದ್ಧಾಂತಗಳನ್ನು ಕತೆಯಲ್ಲಿಡದೆಯೇ ಕತೆಯ ಅಗತ್ಯವನ್ನಷ್ಟೇ ಪೂರೈಸಬೇಕು ಅನ್ನುವುದು ಒಂದು ನಿಯಮ. ಬರೆಹಗಾರ ಎಲ್ಲ ಸಲವೂ ಸಮಾಜವನ್ನು ತಿದ್ದುವುದಕ್ಕೆ ಹೋಗಬೇಕು ಅಂತೇನಿಲ್ಲ ಅನ್ನುವುದು ಕೆಲವು ಸಾಹಿತಿಗಳ ಮಾತಾದರೆ, ಸಮಾಜದ ದನಿಯಾಗದ ಸಾಹಿತ್ಯ ಇದ್ದೇನು ಪ್ರಯೋಜನ ಅನ್ನುವುದು ಹಲವರ ಅಭಿಪ್ರಾಯ. ಅದೇನೇ ಇದ್ದರೂ, ವಾಚ್ಯವಾಗದೇ ಸೂಚ್ಯವಾದರೆ ಮಾತ್ರ ಬರೆಹಕ್ಕೊಂದು ನಾಜೂಕುತನ ಬರುವುದಕ್ಕೆ ಸಾಧ್ಯ. ಬರೆಹ ಯಾಕೆ ನಾಜೂಕಾಗಬೇಕು ಅನ್ನುವ ಪ್ರಶ್ನೆ ಇದಿರಾದರೆ, ನಾಜೂಕಿಗೆ ಒಂದು ಸೂಕ್ಷ್ಮತೆಯಿದೆ; ಆ ಸೂಕ್ಷ್ಮತೆ ಸಾಹಿತ್ಯಕ್ಕೆ ಬೇಕು ಅಂದರೆ ತಪ್ಪಲ್ಲ‌ ಅಲ್ಲವಾ? 'ಬರೀ ಎರಡು ರೆಕ್ಕೆ'ಯಲ್ಲಿರುವುದು ಇಂಥ ನಾಜೂಕುತನ. ಇಲ್ಲಿ ಉತ್ತರ ಕನ್ನಡದ ಸಾಮಾಜಿಕ ವ್ಯವಸ್ಥೆಯ ��ಿತ್ರಣವನ್ನು ಅತ್ಯಂತ ಪ್ರಾಮಾಣಿಕವಾಗಿ, ಯಾವ ಪೂರ್ವಗ್ರಹವೂ ಇಲ್ಲದೇ ಕಟ್ಟಿಕೊಡಲಾಗಿದೆ. ಹಾಗಂತ ಇದು ಯಾರ ದನಿಯೂ ಆಗಿಲ್ಲವಾ ಅಂದರೆ, ಅತಿರೇಕಗಳಿಲ್ಲದೇ ನಾಟಕೀಯ ಪ್ರಲೋಭಗಳಿಲ್ಲದೆಯೂ ದನಿಯಾಗಬಹುದು ಅನ್ನುವುದು ಈ ಕಾದಂಬರಿಯ ಮೂಲಕ ಕಣ್ಣ ಮುಂದಿದೆಯಲ್ಲಾ! ಮದುವೆ ಬೇಡ ಬೇಡ ಅನ್ನುತ್ತ ದಿಟ್ಟವಾಗಿ ಮಾತನಾಡಿ ಕೊನೆಗೆ ಆ ಕಾಲಕ್ಕೆ ಅತ್ಯಂತ ಆಧುನಿಕ ಜೀವನಶೈಲಿಯನ್ನು ರೂಪಿಸಿಕೊಳ್ಳುವ ಹುಡುಗಿಯೂ, ಮೌನವನ್ನೇ ತನ್ನ ಪ್ರತಿಭಟನೆಯ ದನಿಯಾಗಿಸಿಕೊಂಡು ಅಸಹಾಯಕತೆಯಿಂದಲೇ ಸಂಸಾರದ ಸಮತೋಲನ ಕಾಯ್ದುಕೊಳ್ಳಲು ಹೆಣಗುವ ಪಾತ್ರವೂ ಒಂದೇ ಮುಖದ ಎರಡು ಪ್ರತಿಬಿಂಬಗಳಂತೆ ಕಂಡರೆ ಅದು ಅಸಹಜವೇನಲ್ಲ ಅಂತನಿಸುತ್ತದೆ ನನಗೆ. ಈ ಕಾದಂಬರಿಯಲ್ಲಿ ಬಹುತೇಕ ಎಲ್ಲರಿಗೂ ತಮ್ಮ‌‌ ದೈನಿಕ ತೊಳಲಾಟಗಳಿಂದ ಬಿಡುಗಡೆ ಸಿಗುತ್ತದೆ. ನಿತ್ಯದ ನೆಲ ಬಿಟ್ಟು ಹಾರಲು ರೆಕ್ಕೆ ಸಿಗುತ್ತದೆ.

ಈ ಕಾದಂಬರಿಯಲ್ಲಿ ಬಳಸಿದ ಭಾಷೆಯ ಕುರಿತಾಗಿ ಲೇಖಕಿ‌ ಒಂದು ಕಡೆ ಹೇಳಿಕೊಂಡಿದ್ದಾರೆ;"ಭಾಷೆಯು ಆಯಾ ಜನಾಂಗದ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಯಾವುದೇ ಒಂದು ಪ್ರಾದೇಶಿಕ ಭಾಷೆಗೆ ಆ ನೆಲದ ಸೊಗಡು ಇರುತ್ತದೆ". ಉತ್ತರ ಕನ್ನಡದ ಸ್ಥಳೀಯ ಪದಗಳನ್ನು, ಗ್ರಾಮ್ಯ ಪದಗಳನ್ನು ಕಾದಂಬರಿಯಲ್ಲಿ ಬೇಕಾದಷ್ಟು ಬಳಸಲಾಗಿದೆ. ಒಂದು ಜಾಗದ ಸಂಸ್ಕೃತಿಯ ಸೊಗಡನ್ನು ಮನಸಾರೆ ಅನುಭವಿಸಬೇಕಾದರೆ ಅಲ್ಲಿನ ಭಾಷೆಯನ್ನು ಅರಿತುಕೊಳ್ಳುವುದು ಕೂಡಾ ಬಹಳ ಮುಖ್ಯ ಅಲ್ಲವಾ? ಹಾಗೂ ಒಂದು ಪ್ರಾದೇಶಿಕ ಭಾಷೆ ಪುಸ್ತಕದಲ್ಲಿ ದಾಖಲಾಗುವುದು ಕೂಡಾ ಅಷ್ಟೇ ಮುಖ್ಯ. ಪ್ರತಿ ಸಂಭಾಷಣೆಗೂ ಆ ಪ್ರದೇಶದ ಸಾಮಾಜಿಕ ಸಂಗತಿಯನ್ನು ಬಿಚ್ಚಿಡುವ ಸಾಮರ್ಥ್ಯ ಸಿಗೋದು ಸ್ಥಳೀಯ ಪದಗಳನ್ನು ಬಳಸಿಕೊಂಡಾಗಲೇ. ಅದಕ್ಕಾಗಿಯೇ ಕೆಲವೊಮ್ಮೆ ಸಾಹಿತ್ಯ ಒಂದು ಭಾಷೆಯಿಂದ ಇನ್ನೊಂದು ಭಾಷೆಗೆ ಅನುವಾದಗೊಂಡಾಗ ತನ್ನ ಮೂಲ ಸೌಂದರ್ಯವನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗುವುದು.

ಪುಸ್ತಕದ‌ ಕುರಿತಾಗಿ, ಕತೆಯ ಕುರಿತಾಗಿ ಹೇಳಬಹುದು ಅಂತ ಅಂದುಕೊಂಡು ನೀವಿದನ್ನು ಓದಲು ಶುರು ಮಾಡಿ, ಈಗ ಅದನ್ನು ಬಿಟ್ಟು ಉಳಿದೆಲ್ಲವೂ ಇದೆ ಅಂತನ್ನಿಸಿದರೆ ಅದು ಪ್ರಜ್ಞಾಪೂರ್ವಕ ಕೃತ್ಯ ಅಂತಲೇ ಅಂದುಕೊಳ್ಳಬೇಕಾಗಿ ವಿನಂತಿ. ಈ ಎರಡೂ ಪುಸ್ತಕಗಳನ್ನು ತಪ್ಪದೇ ಓದಿ ಅನ್ನುವುದು ಸ್ಪಷ್ಟ‌ ಹಾಗೂ ನೇರ ಕೋರಿಕೆ.

- 'ಶ್ರೀ' ತಲಗೇರಿ
Profile Image for Shwetha Shetty.
14 reviews1 follower
August 14, 2023
ಬಹಳ ದಿನಗಳ ನಂತರ ಮನಸಿಗೆ ಹಿಡಿಸಿದ ಪುಸ್ತಕವಿದು. ಈ ಪುಸ್ತಕ ಓದುತ್ತಾ ಹೋದಂತೆ ಒಂದು ರೀತಿಯ ಆಪ್ತತೆ ಮೂಡಿತು. ಅದೇಕೋ ಈ ಪುಸ್ತಕದ ಕಾಲಘಟ್ಟವನ್ನು ಹತ್ತಿರದಿಂದ ನೋಡದವಳಾದರೂ ಈ ಕಥೆ ನಮ್ಮದೇ ಊರಿನಲ್ಲಿ ನಡೆಯುತ್ತಿದೆಯೆಂಬ ಭಾವ ಮೂಡಿತು.
Profile Image for That dorky lady.
377 reviews72 followers
August 27, 2023
ಸುನಂದಾ ಕಡಮೆಯವರ ಕಥೆಗಳಂತೆಯೇ ಇಲ್ಲೂ ಸಹ ಇಷ್ಟವಾಗುವುದು ನವಿರು ಭಾವಗಳ ಹೆಣಿಗೆ, ಸರಳ ಭಾಷೆ.. ಸರಳ ಅನ್ನೋಕಿಂತ ಸಹಜ ಭಾಷೆ- ಆಯಾ ಪ್ರದೇಶಕ್ಕೆ ತಕ್ಕಹಾಗೆ, ಅಭ್ಯಾಸ, ಅನುಸರಣೆ ಎಲ್ಲವುಗಳನ್ನ ಬಣ್ಣಿಸೋ ರೀತಿ ಚೆಂದ ಅನಿಸಿ ಕಥೆ ಆಪ್ತವಾಗುತ್ತದೆ. ಸಣ್ಣಿಯ ಕಥೆ ಕಿರುಗೂರಿನ ಗಯ್ಯಾಳಿಗಳನ್ನು ನೆನಪಿಸಿತು. ಸರೋಜಿನಿಯ ಕಥೆಗೆ ಇನ್ನಷ್ಟು ಸ್ಪೇಸ್ ಕೊಡಬಹುದಿತ್ತು ಎನಿಸಿದರೂ ಹೀಗಿರುವುದೂ ಒಂದು ರೀತಿ ಚೆನ್ನಾಗಿಯೇ ಇದೆ. ಅರುಂಧತಿ, ದಿಗಂಬರ, ಬಾಯಮ್ಮ, ಸಣ್ಣಿ ಎಲ್ಲವೂ ಸಹಜ ಸುಂದರ ಪಾತ್ರಗಳು ನಮ್ಮ ನಡುವಿನವೇ ಅನಿಸುವಷ್ಟು ಆಪ್ತವಾಗಿವೆ.
Displaying 1 - 5 of 5 reviews

Can't find what you're looking for?

Get help and learn more about the design.